Friday, July 20, 2012

ಅದು ಪರಮಸುಖಕ್ಕೆ ಪ್ರವೇಶದ ದಾರಿ.

ವಾವ್ ಅನ್ನಲೇಬೇಕು ಭತ್ತದ ಸಸಿಯ ಮೊಳಕೆಯೊಡೆಯುತ್ತಿರುವ ದೃಶ್ಯವ ಕಂಡು ಅಲ್ಲವೇ?. ಹೌದು ಸುಂದರ ಬೆಳೆಗಿನಲ್ಲಿ ಇಂತಹ ಒಂದು ದೃಶ್ಯ ನಿಮ್ಮ ಕಣ್ಣೆದುರಿಗಿದ್ದರೆ ಆವತ್ತಿನ ಮನಸ್ಥಿತಿಯೇ ಬೇರೆ ಬಿಡಿ. ಹಸಿರು ಉಲ್ಲಾಸ ತರುತ್ತದೆ, ಮನಸ್ಸು ಪ್ರಫುಲ್ಲಗೊಳ್ಳುತ್ತದೆ. ಇದು ಭಾರತೀಯ ರೈತ ತಾನು ತನ್ನ ಹೊಲಕ್ಕೆ ನಾಟಿಮಾಡಿಕೊಳ್ಳಲು ತಯಾರಿಸಿಕೊಂಡ ಸಸಿಮಡಿ ಗಳು. ಚಚ್ಚೌಕಾಕಾರದಲ್ಲಿದೆ. ಆದರೆ ಜಪಾನ್ ರೈತರುಗಳು ಹೀಗೆ ನಾಟಿಗೂ ಮುನ್ನದ ಗಿಡಗಳನ್ನು ಮಾಡುವಾವ ಒಂದು ಚಿತ್ತಾರ ಮಾಡಿಬಿಡುತ್ತಾರೆ. ಮನುಷ್ಯ ಪ್ರಾಣಿಗಳ ಮುಖ ಹೀಗೆ ಏನೇನೋ. ಅದನ್ನ ನೋಡಲು ಪ್ರವಾಸಿಗರ ದಂಡು ಬರುತ್ತದೆಯಂತೆ. ಆಗ ರೈತನಿಗೆ ಬಿತ್ತನೆಯ ಖರ್ಚು ಪ್ರವಾಸಿಗರ ಮೂಲಕ ಹರಿದುಬರುತ್ತದೆಯಂತೆ. ಬೆಳೆಯುವ ಅಕ್ಕಿಗೆ ಬೆಳೆಯುವ ಮುನ್ನವೆ ಹಣ ಜಣಜಣ ಎಣಿಸುತ್ತಾನೆ. ಹೀಗೆ ಲಾಭ ಅಲ್ಲಿ ಕೃಷಿ ಇಂದಿಗೂ. ಭಾರತದ ಪರಿಸ್ಥಿತಿ ಹಾಗಲ್ಲ. ಇಲ್ಲಿ ಕೃಷಿ ಲಾಭಕರ ಅಲ್ಲ ಅಷ್ಟೊಂದು ಆದರೆ ಮಜ ಗೊತ್ತಾ ಸಿಕ್ಕಾಪಟ್ತೆ ಲಾಭವಾದರೆ ಇಲ್ಲಿಯ ಜನರು ಕೃಷಿಯನ್ನು ಬಿಟ್ಟು ಬಿಡುತ್ತಾರೆ. ಇದು ಇಲ್ಲಿನ ಮನಸ್ಥಿತಿ. ಇರಲಿ ಎಲ್ಲಾ ಒಳ್ಳೆಯದಕ್ಕೆ ಅಂತ ನಾವು ಅಂದುಕೊಳ್ಳುವುದು. ಅದು ಪರಮಸುಖಕ್ಕೆ ಪ್ರವೇಶದ ದಾರಿ.

1 comment:

ushodaya said...

nimma lekhanada koneya saalugalu thumbaa chennaagi moodibandide sir.bhaarathiya raitharige bele beleda meloo belege sariyaada laaba doreyuvudillaa.......ede illina viparyaasa....